ಗುಬ್ಬಿ: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ತುಮಕೂರು- ಗುಬ್ಬಿ ಬಸ್ ಅನ್ನು ಭಾನುವಾರ ಮಧ್ಯರಾತ್ರಿ ಕಳ್ಳರು ಕದ್ದೊದಿದ್ದು, ಸಿಎಸ್ಪುರ ಹೋಬಳಿ ಜನ್ನೇನಹಳ್ಳಿ ಬಳಿ ಬಿಟ್ಟು ಪರಾರಿಯಾಗಿದ್ದಾರೆ.
ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ.
ಬಸ್ ನಿಲ್ದಾಣದಲ್ಲಿ ಯಾವುದೇ ಸೂಕ್ತ ರಕ್ಷಣಾ ವ್ಯವಸ್ಥೆ ಇಲ್ಲದಿರುವುದರ ಜೊತೆಗೆ ನಿಯಮಾನುಸಾರ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೊಂದು ಆಕಸ್ಮಿಕ ಘಟನೆಯಾಗಿದ್ದು, ಇನ್ನು ಮುಂದೆ ಎಲ್ಲ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತುಮಕೂರು ಘಟಕ ವ್ಯವಸ್ಥಾಪಕ ತುಳಸಿರಾಮ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.