ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯೇ ಬದಲು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 9:53 IST
Last Updated 11 ಏಪ್ರಿಲ್ 2022, 9:53 IST

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಅಭ್ಯರ್ಥಿಯ ಬದಲಾಗಿ ಬೇರೊಬ್ಬರು‌ ಪರೀಕ್ಷೆಗೆ ಹಾಜರಾದ ಘಟನೆ ತಿಪಟೂರು ನಗರದಲ್ಲಿ ಸೋಮವಾರ ನಡೆದಿದೆ.

ವಿಜ್ಞಾನವಿಷಯದ ಪರೀಕ್ಷೆಗೆ ಮಂಜುನಾಥ ನೋಂದಣಿ ಮಾಡಿಕೊಂಡಿದ್ದರು. ಇವರ ಬದಲಾಗಿ ಮುರಳೀಧರ ಎಂಬುವವರು ಪರೀಕ್ಷೆ ಬರೆಯುತ್ತಿದ್ದರು. ವಿಷಯ ಗಮನಕ್ಕೆ ಬಂದ ಕೂಡಲೇ ಅವರನ್ನು ಪರೀಕ್ಷಾ ಕೆಂದ್ರದಿಂದ ಹೊರಗೆ ಕಳುಹಿಸಿದ್ದಾರೆ.

ಮಂಜುನಾಥ ತಿಪಟೂರು ನಗರಸಭೆ ಕಚೇರಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.