ಕೊರಟಗೆರೆ: ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಇಬ್ಬರು ಆರೋಪಿಗಳನ್ನು ಪಿಎಸ್ಐ ಜಿ. ಚೇತನ್ ಕುಮಾರ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಬಂಧಿಸಿದೆ.
ಪಟ್ಟಣದ ಪುರುಷೋತ್ತಮ(21) ಮತ್ತು ತಾಲ್ಲೂಕಿನ ಮುಗ್ಗೊಂಡನಹಳ್ಳಿಯ ದರ್ಶನ್(22) ಬಂಧಿತರು.
ಪಟ್ಟಣ ಹೊರವಲಯದ ಬೈಪಾಸ್ ರಸ್ತೆಯ ಮಲ್ಲೇಶಪುರ ಕ್ರಾಸ್ ಬಳಿ ಆರೋಪಿಗಳು ರಾತ್ರಿ ವೇಳೆ ದರೋಡೆಗೆ ಹೊಂಚು ಹಾಕುತ್ತಿದ್ದರು. ಗಸ್ತಿನಲ್ಲಿದ್ದ ಪೊಲೀಸರು ಅನುಮಾನಗೊಂಡು ವಿಚಾರಿಸಿದಾಗ ಮಾರಕಾಸ್ತ್ರ ಇರುವುದು ಕಂಡುಬಂದಿದೆ. ಬಳಿಕ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರಾತ್ರಿ ವೇಳೆ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ದರೋಡೆ ನಡೆಸಿರುವುದನ್ನು ಒಪ್ಪಿ
ಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ಗೌರಿಬಿದನೂರು, ದಾಬಸ್ ಪೇಟೆ ಹಾಗೂ ಕೋಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿವೆ. ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.