ಹುಲಿಯೂರುದುರ್ಗ: ಹೋಬಳಿಯ ರಾಜೇಂದ್ರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಬುಧವಾರ ಮೂರು ವರ್ಷ
ಪ್ರಾಯದ ಹೆಣ್ಣು ಚಿರತೆ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಿತ್ತು. ಬೋನ್ ಇಡುವಂತೆ ಗ್ರಾಮಸ್ಥರು ಪದೇ ಪದೇ ಆಗ್ರಹಿಸುತ್ತಿದ್ದರು. ನಾಗಣ್ಣ ಎಂಬುವವರ ಜಮೀನಿನ ಬಳಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.