ADVERTISEMENT

ಕಾರು ಅಪಘಾತ: ಆರ್ಯವೈಶ್ಯ ನಿಗಮದ ಅಧ್ಯಕ್ಷ ಪಾರು

ಏರ್‌ಬ್ಯಾಗ್‌ ಬದುಕಿಸಿತು ಪ್ರಾಣ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 16:40 IST
Last Updated 23 ಜುಲೈ 2020, 16:40 IST
ಶಿರಾ ತಾಲ್ಲೂಕಿನ ಮರಳಪ್ಪನಹಳ್ಳಿ ಗೇಟ್ ಸಮೀಪ ಕಾರು ಅಪಘಾತದಿಂದ ನಜ್ಜುಗುಜ್ಜಾಗಿದೆ
ಶಿರಾ ತಾಲ್ಲೂಕಿನ ಮರಳಪ್ಪನಹಳ್ಳಿ ಗೇಟ್ ಸಮೀಪ ಕಾರು ಅಪಘಾತದಿಂದ ನಜ್ಜುಗುಜ್ಜಾಗಿದೆ   

ಶಿರಾ: ರಾಷ್ಟ್ರೀಯ ಹೆದ್ದಾರಿಯ ಮರಳಪ್ಪನಹಳ್ಳಿ ಗೇಟ್ ಸಮೀಪ ಗುರುವಾರ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ಬೆಂಗಳೂರಿಗೆ ತೆರಳುತ್ತಿದ್ದ ಕಾರಿಗೆ ಬೈಕ್‌ ಅಡ್ಡಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಮತ್ತೊಂದು ವಾಹನಕ್ಕೂ ಗುದ್ದಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದರೂ ಏರ್‌ಬ್ಯಾಗ್‌ ತೆರೆದುಕೊಂಡ ಕಾರಣ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಕಾರಿನಲ್ಲಿ ಅರುಣ್ ಜತೆ ಜಿಲ್ಲಾ ಪಂಚಾಯಿತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ವಾಸುದೇವ್, ಶಂಕರಪ್ಪ ಇದ್ದರು. ಬದಲಿ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.