ತುಮಕೂರು: ಪಾವಗಡ ತಾಲ್ಲೂಕಿನ ಕೆಂಚಗಾನಹಳ್ಳಿ ಗೇಟ್ ಬಳಿ ಶನಿವಾರ ಕಾರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.
ನೀಲಮ್ಮನಹಳ್ಳಿ ಶ್ರೀನಿವಾಸ್ (65), ಸೀನಪ್ಪ (57) ಮೃತರು. ನಾರಾಯಣನಾಯ್ಕ, ನರಸಿಂಹಪ್ಪ ಎಂಬುವರಿಗೆ ತೀವ್ರ ಗಾಯಗಳಾಗಿವೆ.
ದೊಡ್ಡಹಳ್ಳಿ ಕಡೆಯಿಂದ ಪಾವಗಡಕ್ಕೆ ಬರುತ್ತಿದ್ದ ಕಾರ್ ಎದುರಿಗೆ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟಿವಿಎಸ್ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮತ್ತೊಂದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಪಟ್ಟಣದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.