ಗುಬ್ಬಿ: ತಾಲ್ಲೂಕಿನ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳೆಕಲ್ಲುಬಾರೆಯಲ್ಲಿ ಶುಕ್ರವಾರ ಸಂಜೆ ಕಾರು ಆಕಸ್ಮಿಕವಾಗಿ ಬೆಂಕಿಗೆ ತುತ್ತಾಗಿದೆ.
ಶಿವಣ್ಣ ಎಂಬುವರು ತುಮಕೂರಿನಿಂದ ತಮ್ಮ ಪತ್ನಿಯ ಜತೆ ತಾಲ್ಲೂಕಿನ ಮಣ್ಣಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಸಮಯದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಗುಬ್ಬಿ ಪೊಲೀಸರು ಪರಿಶೀಲನೆ ನಡೆಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.