ADVERTISEMENT

ತುಮಕೂರು: ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 3:47 IST
Last Updated 20 ಆಗಸ್ಟ್ 2022, 3:47 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು   

ತುಮಕೂರು: ಶಿರಾ ತಾಲ್ಲೂಕಿನ ತರೂರು ಗೇಟ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಶಿರಾ ತಾಲ್ಲೂಕಿ‌ನ ಕಡವಿಗೆರೆ ನಿವಾಸಿಗಳಾದ ಅವಿನಾಶ್ (28) ಮತ್ತು ಅವರ ಮಗಳು ಪ್ರಣಂತಿ (5), ಅವಿನಾಶ್ ಸಂಬಂಧಿಕರ ಮಗಳು ಸೌಖ್ಯ ( 4) ಮೃತಪಟ್ಟ ದುರ್ದೈವಿಗಳು.

ಅವಿನಾಶ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಿರಾದಿಂದ ನೆಲಹಾಳ್‌ಗೆತೆರಳುವಾಗ ಅಪಘಾತ ಸಂಭವಿಸಿದೆ. ಅವಿನಾಶ್ ಮತ್ತು ಪ್ರಣಂತಿ ಸ್ಥಳದಲ್ಲಿಯೇ ಮೃತಪಟ್ಟರೆ, ಸೌಖ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.