ADVERTISEMENT

ತಿಪಟೂರು:ನಗದು ಕಳವು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 2:37 IST
Last Updated 3 ನವೆಂಬರ್ 2020, 2:37 IST

ತಿಪಟೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿರುವ ಎಸ್‌.ಎನ್. ಶಿವಕುಮಾರ್ ಅಂಡ್ ಸನ್ ಎಂಬ ಕೊಬ್ಬರಿ ಅಂಗಡಿಯಲ್ಲಿ ₹ 2.20 ಲಕ್ಷ ನಗದು ಹಾಗೂ ಕಬ್ಬಿಣದ ಪೆಟ್ಟಿಗೆಯನ್ನು ಕಳವು ಮಾಡಲಾಗಿದೆ.

ಈ ಸಂಬಂಧ ಅಂಗಡಿ ಮಾಲೀಕ ಎಸ್.ಎನ್. ಶಿವಕುಮಾರ್ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ತುಮಕೂರಿನಿಂದ ಶ್ವಾನದಳ ಕರೆಸಲಾಗಿದೆ. ನಗರ ಠಾಣೆಯ ಸಿಪಿಐ ಶಿವಕುಮಾರ್ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT