ADVERTISEMENT

ಸಿ.ಡಿ. ಬರಲಿ, ಯಾರು ಯಾವ ಪಾತ್ರ ಮಾಡಿದ್ದಾರೋ ನೋಡೋಣ: ಟಿ.ಬಿ.ಜಯಚಂದ್ರ 

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 9:22 IST
Last Updated 15 ಜನವರಿ 2021, 9:22 IST
ಕಾಂಗ್ರೆಸ್ ಮುಖಂಡ ಟಿ.ಬಿ. ಜಯಚಂದ್ರ
ಕಾಂಗ್ರೆಸ್ ಮುಖಂಡ ಟಿ.ಬಿ. ಜಯಚಂದ್ರ   

ತುಮಕೂರು: ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರಿತಾದ ಸಿ.ಡಿ. ಇದೆ ಎಂದು ಪತ್ರಿಕೆಗಳಲ್ಲಿ ಸುದ್ದಿ ಬರುತ್ತಿದೆ. ಬಸನಗೌಡ ಪಾಟೀಲ ಯತ್ನಾಳ್ ಅವರು ನನ್ನ ಬಳಿ ಸಿ.ಡಿ. ಇದ್ದಿದ್ದರೆ ಉಪಮುಖ್ಯಮಂತ್ರಿ ಆಗುತ್ತಿದ್ದೆ ಎಂದಿದ್ದಾರೆ. ಇಷ್ಟು ಬಹಿರಂಗವಾಗಿ ಮಾತನಾಡಿದ ಮೇಲೆ ಸಿ.ಡಿ. ಹೊರ ಬಂದೇ ಬರುತ್ತದೆ ಎಂದು ಕಾಂಗ್ರೆಸ್ ಮುಖಂಡ ಟಿ.ಬಿ. ಜಯಚಂದ್ರ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಾರ ಬಳಿ ಇಲ್ಲ ಎಂದರೂ ನಮ್ಮ ಸ್ನೇಹಿತ ಎಚ್‌. ವಿಶ್ವನಾಥ್ ಬಳಿ ಸಿ.ಡಿ. ಇದ್ದೇ ಇರುತ್ತದೆ. ಅದರಲ್ಲಿ ಏನಿದೆ, ಯಾರು ಯಾವ ಪಾತ್ರ ಮಾಡಿದ್ದಾರೆ ಎನ್ನುವುದನ್ನು ಆ ಮೇಲೆ ನೋಡೋಣ’ ಎಂದು ಕಾಲೆಳೆದರು.

ಬಿಜೆಪಿ ಮುಖಂಡರೇ ಸಿ.ಡಿ. ವಿಚಾರವಾಗಿ ಇಷ್ಟೊಂದು ನೇರವಾಗಿ ಹೇಳುತ್ತಿದ್ದಾರೆ ಎಂದರೆ ಇದರಲ್ಲಿ ಏನೋ ಇದೆ. ಈಗ ಇದೆಲ್ಲವೂ ಹೊರಗೆ ಬರಲು ಆರಂಭವಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.