ADVERTISEMENT

ಶಿವಕುಮಾರ ಶ್ರೀಗಳ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮಿತ್ ಶಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಏಪ್ರಿಲ್ 2022, 6:30 IST
Last Updated 1 ಏಪ್ರಿಲ್ 2022, 6:30 IST
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ   

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ ಮತ್ತು ಗುರು ವಂದನಾ ಪ್ರಯುಕ್ತಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವವಿಶೇಷ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ.

ಸಚಿವ ಶಾ ಅವರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಭಾಗವಹಿಸಿದ್ದಾರೆ.

ಅಮಿತ್‌ ಶಾ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ವಿಶ್ವವಿದ್ಯಾಲಯ ಹೆಲಿಪ್ಯಾಡ್ ಗೆ ಬಂದಿಳಿದರು. ಬಿ.ಎಚ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.

ADVERTISEMENT

ಶ್ರೀಗಳ ಭಕ್ತರು ರಾಜ್ಯದ ವಿವಿಧೆಡೆಗಳಿಂದ ಮಠಕ್ಕೆ ಆಗಮಿಸುತ್ತಿದ್ದಾರೆ.

ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶ್ರೀಗಳ ಜಯಂತಿ ಮತ್ತು ಗುರು ವಂದನಾ ಕಾರ್ಯಕ್ರಮ ಪ್ರಯುಕ್ತ ಗಣ್ಯರು ಮಠಕ್ಕೆ ಭೇಟಿ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.