ತಿಪಟೂರು: ತಾಲ್ಲೂಕಿನ ರಂಗಾಪುರದಲ್ಲಿ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿಗಳಿಗೆ ಇಲ್ಲಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ರಂಗಾಪುರ ಗ್ರಾಮದ ಮಹದೇವಮ್ಮ ಎಂಬುವರು 2013ರ ಜೂನ್ 22ರಂದು ತೋಟದಿಂದ ಜಾನುವಾರುಗಳನ್ನು ಹಿಡಿದು ಬರುತ್ತಿದ್ದಾಗ ಇಬ್ಬರು ಬೈಕ್ನಲ್ಲಿ ಬಂದು ಸರ ಕಸಿದು ಪರಾರಿಯಾಗಿದ್ದರು.
ಪ್ರಕರಣ ದಾಖಲಿಸಿದ್ದ ಗ್ರಾಮಾಂತರ ಠಾಣೆ ಪೊಲೀಸರು ಅಬುತರಬ್ ಮತ್ತು ಅಬ್ದುಲ್ ಹಸನ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನಗರದ ಐದನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಶಿವಕುಮಾರ್ ಅವರು ಆರೋಪಿ ಅಬ್ದುಲ್ ಹಸನ್ಗೆ 7 ವರ್ಷ ಕಠಿಣ ಶಿಕ್ಷೆ ಮತ್ತು ₹ 25 ಸಾವಿರ ದಂಡ ಹಾಗೂ ಆರೋಪಿ ಗಿರೀಶ್ಗೆ 7 ವರ್ಷ ಸಾದಾ ಸಜೆ ಮತ್ತು ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ವಕೀಲ ಎಸ್.ರಾಜಣ್ಣ ಸರ್ಕಾರದ ಪರ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.