ADVERTISEMENT

ಶ್ರೀರಾಮ ನವಮಿ | ದೇವರ ದರ್ಶನ ಪಡೆದ ನಾಗರಿಕರು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 6:57 IST
Last Updated 31 ಮಾರ್ಚ್ 2023, 6:57 IST
ಶಿರಾದ ಜ್ಯೋತಿನಗರದಲ್ಲಿರುವ ರಾಮ ಮಂದಿರದಲ್ಲಿ ಗುರುವಾರ ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ಭಕ್ತರಿಗೆ ಹೆಸರು ಬೇಳೆ ಹಾಗೂ ಪಾನಕ ವಿತರಿಸಲಾಯಿತು
ಶಿರಾದ ಜ್ಯೋತಿನಗರದಲ್ಲಿರುವ ರಾಮ ಮಂದಿರದಲ್ಲಿ ಗುರುವಾರ ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ಭಕ್ತರಿಗೆ ಹೆಸರು ಬೇಳೆ ಹಾಗೂ ಪಾನಕ ವಿತರಿಸಲಾಯಿತು   

ಶಿರಾ: ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗುರುವಾರ ಭಕ್ತರು ಶ್ರೀರಾಮ ನವಮಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಹಬ್ಬದ ಹಿನ್ನೆಲೆಯಲ್ಲಿ ಶ್ರೀರಾಮ, ಆಂಜನೇಯ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನಗರದ ಜ್ಯೋತಿ ನಗರದಲ್ಲಿರುವ ರಾಮ ಮಂದಿರ, ಗವಿ ಆಂಜನೇಯ, ಸಾಕ್ಷಿ ಆಂಜನೇಯ, ನಾಯಕರ ಹಟ್ಟಿಯಲ್ಲಿರುವ ಆಂಜನೇಯ, ಪಂಚಮುಖಿ ಆಂಜನೇಯ, ಕೋಟೆ ಆಂಜನೇಯ, ಸಂತೇಪೇಟೆಯ ಮಾರುತಿ ದೇವಾಲಯ, ಬಿಲ್ವ ಗಣೇಶ ಆಂಜನೇಯ ದೇವಾಲಯದಲ್ಲಿ ಪಂಚಾಭಿಷೇಕ ನಡೆಸಿ ವಿಶೇಷ ಪೂಜೆ ನಡೆಸಲಾಯಿತು.

ADVERTISEMENT

ಭಕ್ತರು ಬೆಳಿಗ್ಗೆಯಿಂದಲೇ ವಿಶೇಷವಾಗಿ ಶ್ರೀರಾಮಚಂದ್ರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿ ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೇವಾಲಯಗಳಲ್ಲಿ ಭಕ್ತರಿಗೆ ಹೆಸರು ಬೇಳೆ ಹಾಗೂ ಪಾನಕ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.