ADVERTISEMENT

ಸ್ವಚ್ಛತಾ ಕಾರ್ಯಕ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 4:28 IST
Last Updated 1 ಅಕ್ಟೋಬರ್ 2021, 4:28 IST

ತಿಪಟೂರು: ಅ. 2ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ತಿಪಟೂರು ಹೋರಾಟ ಸಮಿತಿ ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ನಗರದ ಈಡೇನಹಳ್ಳಿ ಗೇಟ್ ಬಳಿ ಇರುವ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಸ್ವಚ್ಛತಾ ಕಾರ್ಯ ಪ್ರಾರಂಭಿಸಲಿದ್ದು, ಆಸಕ್ತ ಸಾರ್ವಜನಿಕರು ಸಂಸ್ಥೆಗಳೊಂದಿಗೆ ಸಹಕರಿಸಬಹುದು ಎಂದು ಪ್ರಕಟಣೆ ಕೋರಿದೆ.

ಹೆಚ್ಚಿನ ಮಾಹಿತಿಗೆ ಡಿ. ಅಶೋಕ್ ಕುಮಾರ್ ಮೊಬೈಲ್‌ 98449 83080 ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.