ತುಮಕೂರು: ‘ಬೆಂಗಳೂರಿಗೆ ಯಾವಾಗ ಬರುತ್ತೀರಿ. ಬಂದಾಗ ಫೋನ್ ಮಾಡಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಇದರಲ್ಲಿ ವಿಶೇಷವೇನೂ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿಕ್ಕನಾಯಕನಹಳ್ಳಿ ತಾಲ್ಲೂಕು ಜೆ.ಸಿ.ಪುರದಲ್ಲಿ ಗುರುವಾರ ಸಚಿವ ಜೆ.ಸಿ.ಮಾಧುಸ್ವಾಮಿ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೇವೇಗೌಡ ಅವರು ಬೆಂಗಳೂರಿಗೆ ಬಂದಾಗ ಫೋನ್ ಮಾಡುವಂತೆ ಮುಖ್ಯಮಂತ್ರಿಗೆ ಹೇಳಿದ್ದರಿಂದ ಈ ಸ್ಪಷ್ಟನೆ ನೀಡಿದರು.
‘ದೇವೇಗೌಡರು ನಮ್ಮ ಹಿರಿಯರು. ಅವರ ಮಾರ್ಗದರ್ಶನ ಯಾವಾಗಲೂ ಇದ್ದೇ ಇರುತ್ತೆ. ರಾಜಕೀಯ ಏನೂ ಮಾತನಾಡಿಲ್ಲ. ಮದುವೆಯಲ್ಲಿ ಭೇಟಿಯಾದಾಗ ಕುಶಲೋಪರಿಯಷ್ಟೇ ನಡೆಯಿತು’ ಎಂದರು.
ಬಿಜೆಪಿ ಬಗ್ಗೆ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಮೃದು ಧೋರಣೆ ತಾಳಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಯಾವ ಸಾಫ್ಟೂ ಇಲ್ಲ, ಕಾರ್ನರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.