ADVERTISEMENT

ಗೆಲ್ಲುವ ವಿಶ್ವಾಸ ಇದೆ: ಶ್ರೀನಿವಾಸ್‌ ಕಲ್ಕೆರೆ

​ಪ್ರಜಾವಾಣಿ ವಾರ್ತೆ
Published 2 ಮೇ 2019, 10:49 IST
Last Updated 2 ಮೇ 2019, 10:49 IST
ಕೆ.ವಿ.ಶ್ರೀನಿವಾಸ್‌ ಕಲ್ಕೆರೆ
ಕೆ.ವಿ.ಶ್ರೀನಿವಾಸ್‌ ಕಲ್ಕೆರೆ   

ತುಮಕೂರು:ಈ ಚುನಾವಣೆಯಲ್ಲಿ ಎಲ್ಲರ ನಿರೀಕ್ಷೆ ಮೀರಿ ನಾನು ಜಯಗಳಿಸುವ ವಿಶ್ವಾಸ ಇದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಕೆ.ವಿ.ಶ್ರೀನಿವಾಸ್‌ ಕಲ್ಕೆರೆ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ನೀರಿನ ಸಮಸ್ಯೆ ಪರಿಹಾರ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಕನಸಿನೊಂದಿಗೆ ಕಣದಲ್ಲಿದ್ದೇನೆ’ ಎಂದರು.

‘ಮೈತ್ರಿ ಪಕ್ಷದ ಅಭ್ಯರ್ಥಿ ಎಚ್‌.ಡಿ.ದೇವೇಗೌಡ ಮತ್ತು ಬಿಜೆಪಿ ಅಭ್ಯರ್ಥಿ ಜಿ.ಎಸ್‌.ಬಸವರಾಜು– ಇಬ್ಬರನ್ನೂ ಜಿಲ್ಲೆಯ ಮತದಾರರು ತಿರಸ್ಕರಿಸಬೇಕು’ ಎಂದರು.

ADVERTISEMENT

ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ದೇವೇಗೌಡರ ಮನಸ್ಸಿನಲ್ಲಿ ಅಭಿವೃದ್ಧಿ ಚಿಂತನೆ ಇರಬಹುದು. ಆದರೆ ಅವರ ಶರೀರ ಸ್ಪಂದಿಸುವುದು ಕಷ್ಟ. ಬಸವರಾಜು ಅಧಿಕಾರದ ದಾಹದಿಂದ ಅವರ ಬಳಿ ಅಭಿವೃದ್ಧಿ ಚಿಂತನೆಗಳೇ ಇಲ್ಲ. ಅವರು ಕೇವಲ ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.