ಕೊರಟಗೆರೆ: ಹುಟ್ಟುಹಬ್ಬದ ಫ್ಲೆಕ್ಸ್ ಕಟ್ಟುವ ಸಂಬಂಧ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಮಂಗಳವಾರ ರಾತ್ರಿ ಮಾತಿನ ಚಕಮಕಿ ನಡೆದಿದೆ.
ಪಟ್ಟಣದ ಮುಖ್ಯರಸ್ತೆಯ ಬಸ್ ನಿಲ್ದಾಣದಲ್ಲಿ ಫ್ಲೆಕ್ಸ್ ಕಟ್ಟುವ ಸಂಬಂಧ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ಆ.6ರಂದು ಶಾಸಕ ಡಾ.ಜಿ.ಪರಮೇಶ್ವರ ಅವರ ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ಎಲ್ಲ ಕಡೆ ಫ್ಲೆಕ್ಸ್ ಕಟ್ಟಲಾಗಿತ್ತು. ಆ.18ರಂದು ಮಾಜಿ ಶಾಸಕ, ಜೆಡಿಎಸ್ ಮುಖಂಡ ಪಿ.ಆರ್.ಸುಧಾಕರ್ಲಾಲ್ ಹುಟ್ಟುಹಬ್ಬದ ನಿಮಿತ್ತ ಜೆಡಿಎಸ್ ಕಾರ್ಯಕರ್ತರು ಲಾಲ್ ಅವರಿಗೆ ಶುಭಕೋರುವ ಫ್ಲೆಕ್ಸ್ ಕಟ್ಟುವ ವೇಳೆ ಎರಡೂ ಪಕ್ಷದ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ.
ಯಾವುದೆ ಅಹಿತಕರ ಘಟನೆ ಸಂಭವಿಸಿಲ್ಲ. ಘಟನೆ ವೇಳೆ ಪೊಲೀಸರ ಮಧ್ಯ ಪ್ರವೇಶದಿಂದ ಸಮಸ್ಯೆ ಅಂತ್ಯ ಕಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.