ADVERTISEMENT

ಶಿಕ್ಷಕರ ಸಮಸ್ಯೆಗೆ ನಿರಂತರ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 2:49 IST
Last Updated 23 ಅಕ್ಟೋಬರ್ 2020, 2:49 IST
ಕುಣಿಗಲ್‌ನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಪರ ಮುಖಂಡ ಡಿ. ನಾಗರಾಜಯ್ಯ ಮತಯಾಚಿಸಿದರು
ಕುಣಿಗಲ್‌ನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಪರ ಮುಖಂಡ ಡಿ. ನಾಗರಾಜಯ್ಯ ಮತಯಾಚಿಸಿದರು   

ಕುಣಿಗಲ್: ಆಗ್ನೇಯ ಪದವೀಧರ ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿರುವ ಚೌಡರೆಡ್ಡಿ ಅವರನ್ನು ಗೆಲ್ಲಿಸಿ ಎಂದು ಮುಖಂಡ ಡಿ.ನಾಗರಾಜಯ್ಯ ಮನವಿ ಮಾಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್‌ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ರಮೇಶ್ ಬಾಬು, ಪದವೀಧರ ಕ್ಷೇತ್ರದಿಂದಲೂ ಆಯ್ಕೆಯಾಗ ಬಯಸಿದ್ದರು. ಈಗಾಗಲೇ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಗೆದ್ದವರನ್ನು ಬಿಟ್ಟು ಬೇರೆಯವರಿಗೆ ನೀಡಲು ಒಪ್ಪದ ಕಾರಣ ಜೆಡಿಎಸ್‌ನಲ್ಲಿ ಅಧಿಕಾರ ಅನುಭವಿಸಿ, ಅನುಭವ ಪಡೆದು, ಮತ್ತೆ ಅಧಿಕಾರ ಪಡೆಯಲು ಕಾಂಗ್ರೆಸ್ ಸೇರಿದ್ದಾರೆ. ಮತದಾರರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ADVERTISEMENT

ಅಭ್ಯರ್ಥಿ ಚೌಡರೆಡ್ಡಿ ಮಾತನಾಡಿ, ದೊರೆತ ಅವಕಾಶ ಬಳಸಿಕೊಂಡು ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಿರುವೆ. ಕೊರೊನಾ ಭೀತಿಯಲ್ಲಿ ಬಹುತೇಕ ಪದವೀಧರರು ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಖಾಸಗಿ ಶಾಲೆ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಬಿಜೆಪಿ ಸರ್ಕಾರ ಸಮಸ್ಯೆಗೆ ಸ್ಪಂದಿಸದ ಕಾರಣ ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದರು.

ವಿಧಾನಪರಿಷತ್ ಸದಸ್ಯರಾದ ಕಾಂತರಾಜು, ಅಪ್ಪಾಜಿ ಗೌಡ, ಜೆಡಿಎಸ್ಯುವ ಘಟಕದ ಪ್ರದಾನ ಕಾರ್ಯದರ್ಶಿ ಬಿ.ಎನ್. ಜಗದೀಶ್, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಲ್. ಹರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.