ಕುಣಿಗಲ್: ದೇಶ ಜನ ಕೊರೊನಾ ಮತ್ತು ಅತಿವೃಷ್ಠಿಗಳ ಸಂಕಷ್ಟದಲ್ಲಿರುವಾಗ ಬಿಜೆಪಿ ಸರ್ಕಾರ ಜನ, ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಜಾರಿಗೆ ತರುತ್ತಿದೆ. ಇದು ಉಳ್ಳವರಿಗೆ ವರದಾನವಾದರೆ, ಶ್ರೀಸಾಮಾನ್ಯನಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.
ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಜಯಪ್ಪಾಚಾರ್ ಅವರಿಗೆ ಮನವಿ ಸಲ್ಲಿಸಿದರು.
ರೈತ ವಿರೋಧಿ ಭೂಸುಧಾರಣೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಪುರಸಭೆ ಸದಸ್ಯರು, ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.