ಕುಣಿಗಲ್: ತುಮಕೂರು ಜಿಲ್ಲಾ ಕೇಂದ್ರದ ನಂತರ ಹೆಚ್ಚು ಸೋಂಕಿತರಿರುವ ಕುಣಿಗಲ್ ತಾಲ್ಲೂಕಿನಲ್ಲಿ ಮಂಗಳವಾರ ಸೋಂಕಿತರ ಸಂಖ್ಯೆ 200 ದಾಟಿದೆ. ಸೋಂಕಿತ ವ್ಯಕ್ತಿಯೊಬ್ಬ ಜಿಲ್ಲಾ ಕೊವೀಡ್ ಆಸ್ಪತ್ರೆಗೆ ಸಾಗಿಸುವ ಮುನ್ನ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ತಾಲ್ಲೂಕಿನ ಅಮೃತೂರು ಹೋಬಳಿಯ ಹೊಸಪಾಳ್ಯದ ನಾರಾಯಣ್ಣಪ್ಪ (67) ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದಾಗ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ತುಮಕೂರಿಗೆ ಸಾಗಿಸುವ ಮೊದಲೆ ಮೃತಪಟ್ಟಿದ್ದಾರೆ. ಅವರ ಮಗನಿಗೂ ಸೋಂಕು ದೃಢಪಟ್ಟಿದೆ. ಸಂಜೆ ಹೊಸಪಾಳ್ಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ವೈದ್ಯಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 206ಕ್ಕೆ ತಲುಪಿದೆ. 116 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.