ತುಮಕೂರು: ಗುಬ್ಬಿ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ತಹಶೀಲ್ದಾರ್ಗೆ ಸೋಂಕು ತಗುಲಿದ ಕಾರಣ ಶುಕ್ರವಾರ ಗುಬ್ಬಿ ತಹಶೀಲ್ದಾರ್ ಕಚೇರಿಯನ್ನು ಸೀಲ್ಡೌನ್ ಮಾಡಲಾಯಿತು.
ಆತಂಕ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ 4 ರಿಂದ 6ವರವರೆಗೆ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಹಶೀಲ್ದಾರ್ ಪ್ರದೀಪ್ ಭಾಗವಹಿಸಿದ್ದರು. ಆದರೆ, ಇವರಿಗೆ ಸೋಂಕು ತಗುಲಿರುವುದು ದೃಢಪಟ್ಟ ನಂತರ ಸಭೆಯಲ್ಲಿ ಇವರ ಅಕ್ಕಪಕ್ಕದಲ್ಲಿ ಕುಳಿತಿದ್ದ ಇತರೆ ಅಧಿಕಾರಿಗಳಿಗೂ ಇದೀಗ ಆತಂಕ ಕಾಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.