ADVERTISEMENT

ಕೋರೊನಾ ಸೋಂಕಿನಿಂದ ಗುಬ್ಬಿಯ ಪ್ರಜಾವಾಣಿ ಅರೆಕಾಲಿಕ ವರದಿಗಾರ ಸಾವು

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 4:15 IST
Last Updated 15 ಆಗಸ್ಟ್ 2020, 4:15 IST
ಗುಬ್ಬಿ ತಾಲ್ಲೂಕು ಪ್ರಜಾವಾಣಿ ಅರೆಕಾಲಿಕ ವರದಿಗಾರ ಜಯಣ್ಣ
ಗುಬ್ಬಿ ತಾಲ್ಲೂಕು ಪ್ರಜಾವಾಣಿ ಅರೆಕಾಲಿಕ ವರದಿಗಾರ ಜಯಣ್ಣ   

ತುಮಕೂರು: ಗುಬ್ಬಿ ತಾಲ್ಲೂಕು ಪ್ರಜಾವಾಣಿ ಅರೆಕಾಲಿಕ ವರದಿಗಾರ ಜಯಣ್ಣ (37) ಕೊರೊನಾ ಸೋಂಕಿನಿಂದ ಶುಕ್ರವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅವರಿಗೆ ಒಂದೂವರೆ ವರ್ಷದ ಗಂಡು ಮಗು ಹಾಗೂ ಪತ್ನಿ ಇದ್ದಾರೆ.

ಚೇಳೂರು ಹೋಬಳಿ ಸೊಣಬನಹಳ್ಳಿಯ ಜಯಣ್ಣ ಗುಬ್ಬಿ ಪಟ್ಟಣದಲ್ಲಿ ಪ್ರಜಾವಾಣಿ ಏಜೆಂಟರಾಗಿಯೂ ಕೆಲಸ ಮಾಡುತ್ತಿದ್ದರು.

ADVERTISEMENT

ಇತ್ತೀಚೆಗೆ ಅವರ ಸಂಬಂಧಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿತ್ತು. ಇವರು ಅವರ ಪ್ರಾಥಮಿಕ ಸಂಪರ್ಕಿತರಾಗಿದ್ದರು. ಸೋಂಕು ತಗುಲಿರುವುದು ದೃಢವಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.