ತುಮಕೂರು: ಗುಬ್ಬಿ ತಾಲ್ಲೂಕು ಪ್ರಜಾವಾಣಿ ಅರೆಕಾಲಿಕ ವರದಿಗಾರ ಜಯಣ್ಣ (37) ಕೊರೊನಾ ಸೋಂಕಿನಿಂದ ಶುಕ್ರವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅವರಿಗೆ ಒಂದೂವರೆ ವರ್ಷದ ಗಂಡು ಮಗು ಹಾಗೂ ಪತ್ನಿ ಇದ್ದಾರೆ.
ಚೇಳೂರು ಹೋಬಳಿ ಸೊಣಬನಹಳ್ಳಿಯ ಜಯಣ್ಣ ಗುಬ್ಬಿ ಪಟ್ಟಣದಲ್ಲಿ ಪ್ರಜಾವಾಣಿ ಏಜೆಂಟರಾಗಿಯೂ ಕೆಲಸ ಮಾಡುತ್ತಿದ್ದರು.
ಇತ್ತೀಚೆಗೆ ಅವರ ಸಂಬಂಧಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿತ್ತು. ಇವರು ಅವರ ಪ್ರಾಥಮಿಕ ಸಂಪರ್ಕಿತರಾಗಿದ್ದರು. ಸೋಂಕು ತಗುಲಿರುವುದು ದೃಢವಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.