ಕುಣಿಗಲ್: ಪತ್ನಿಗೆ ಸೋಂಕು ತಗುಲಿ, ಕೋವಿಡ್ ಕೇರ್ ಸೆಂಟರ್ಗೆ ತೆರಳಿದ ಬಳಿಕ ಪತಿಯ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಪಟ್ಟಣದ ವಿದ್ಯಾನಗರದ ನಿವಾಸಿ ನಿವೃತ್ತ ಶಿಕ್ಷಕ ಶಿವಲಿಂಗೆಗೌಡ(68) ಮೃತಪಟ್ಟವರು. ಇವರ ಪತ್ನಿ ನಿವೃತ್ತ ನರ್ಸ್ ನೀಲಮ್ಮ(63) ಅವರಿಗೆ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ಧೃಢಪಟ್ಟಿತ್ತು.
ಪತ್ನಿಗೆ ಕೇರ್ ಸೆಂಟರ್ಗೆ ತೆರಳಿದ ಬಳಿಕ ಮನೆಯಲ್ಲಿ ಒಬ್ಬರೆ ಇದ್ದ ಪತಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ನಡೆಸಲಾಗಿದ್ದು, ವರದಿ ನೆಗೆಟೀವ್ ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಯೂ ನೆಗೆಟೀವ್ ವರದಿ ಬಂದಿದೆ. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.
ಮಾನವೀಯತೆ ದೃಷ್ಟಿಯಿಂದ ಪತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪತ್ನಿಗೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಅವಕಾಶ ಕಲ್ಪಿಸಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಂತ್ಯಕ್ರಿಯೆಯು ಸೋಮವಾರ ಬೆಳಿಗ್ಗೆ ಮೃತರ ಸ್ವಗ್ರಾಮ ರಾಮನಗರ ಜಿಲ್ಲೆ ದೊಡ್ಡ ಗಂಗಾವಾಡಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.