ADVERTISEMENT

ಕೋವಿಡ್ ದೃಢ: ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಮೇ 2021, 4:53 IST
Last Updated 10 ಮೇ 2021, 4:53 IST
 ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಉಪತಹಶೀಲ್ದಾರ್ ಸೋಮ್ಲ ನಾಯ್ಕ್
ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಉಪತಹಶೀಲ್ದಾರ್ ಸೋಮ್ಲ ನಾಯ್ಕ್   

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬೇಲೇನಹಳ್ಳಿ ಬಳಿಯ ತೋಟದಲ್ಲಿ ನಿವೃತ್ತ ಉಪತಹಶೀಲ್ದಾರ್ ಸೋಮ್ಲ ನಾಯ್ಕ್(68) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಹನದೊಳಗೆ ಗುಂಡು ಹಾರಿಸಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ತನ್ನಿಂದ ಕುಟುಂಬದವರಿಗೆ ಕೋವಿಡ್ ಹರಡಬಾರದು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸೋಮ್ಲನಾಯ್ಕ್ ‌ಅವರು ಇದೇ 7ರಂದು ಕೋವಿಡ್ ಪರೀಕ್ಷೆಗೆ ಮಾದರಿ ನೀಡಿದ್ದರು. 9ರಂದು ವರದಿ ಬಂದಿತ್ತು, ಅವರಿಗೆ ಕೋವಿಡ್ ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.