ADVERTISEMENT

ತುಮಕೂರು: 1,211 ಆರೋಗ್ಯ ಕಾರ್ಯಕರ್ತೆಯರಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 6:22 IST
Last Updated 16 ಜನವರಿ 2021, 6:22 IST
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಡಿಎಚ್ಒ ನಾಗೇಂದ್ರಪ್ಪ ಲಸಿಕೆ ಪಡೆಯುತ್ತಿರುವುದು
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಡಿಎಚ್ಒ ನಾಗೇಂದ್ರಪ್ಪ ಲಸಿಕೆ ಪಡೆಯುತ್ತಿರುವುದು   

ತುಮಕೂರು: ಕೋವಿಶೀಲ್ಡ್‌ ಲಸಿಕ್ ಅಭಿಯಾನಕ್ಕೆ ನಗರದ ಜಿಲ್ಲಾ ಆಸ್ಪತ್ರೆ, ಕ್ಯಾತ್ಸಂದ್ರ, ಕೋತಿತೋಪು ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಶ್ರೀದೇವಿ ಆಸ್ಪತ್ರೆ ಮತ್ತು ತಾಲ್ಲೂಕು ಕೇಂದ್ರಗಳ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಮೊದಲ ದಿನ 1,211 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಮೊದಲ ಸುತ್ತಿನಲ್ಲಿ 20,040 ಮಂದಿ ಹೆಸರು ನೋಂದಾಯಿಸಿದ್ದಾರೆ.

ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದಲ್ಲಿ ಶನಿವಾರ ಲಸಿಕೆ ಪಡೆಯಲು ಬಂದವರಿಗೆ ವೆಲ್ ಕಮ್ ಟು ಕೋವಿಡ್ ಲಸಿಕೆ ಎಂಬ ರಂಗೋಲಿ ಚಿತ್ತಾರ ಬಿಡಿಸಿ ಬರಮಾಡಿಕೊಳ್ಳಲಾಯಿತು.

ADVERTISEMENT

ಮೊದಲಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ಲಸಿಕೆ ಪಡೆದರು. ಬಳಿಕ ಉಳಿದವರು ಲಸಿಕೆ ಹಾಕಿಸಿಕೊಂಡರು.

ಈ ವೇಳೆ ಡಾ.ರಜಿನಿ, ಡಾ.ವೀಣಾ, ಡಾ.ಕೇಶವರಾಜ್, ಡಾ.ಮೋಹನ್ ದಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.