ಪಾವಗಡ: ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ಗುರುವಾರ ವಿದ್ಯುತ್ ತಗುಲಿ ಹಸು ಮೃತಪಟ್ಟಿದೆ.
ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಗ್ರಾಮದ ಕೃಷಿ ಕೂಲಿ ಕಾರ್ಮಿಕ ಲಿಂಗಮೂರ್ತಿ ಅವರ ಹಸು ಸತ್ತಿದೆ. ಮರಗಳ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿ ಶರ್ಟ್ ಸರ್ಕೀರ್ಟ್ನಿಂದಾಗಿ ತುಂಡಾಗಿ ಬಿದ್ದಿದೆ. ಕೂಗಳತೆ ದೂರದಲ್ಲಿ ಕೂಲಿ ಕಾರ್ಮಿಕರ ಶೆಡ್ ಇದ್ದು, 20ರಿಂದ 30 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ಬೆಳಗಿನ ಜಾವ 5.30ಕ್ಕೆ ಘಟನೆ ನಡೆದಿದ್ದು, 11 ಗಂಟೆವರೆಗೂ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಕರೆ ಮಾಡಿ ವಿಚಾರ ತಿಳಿಸಿದರೂ ಬೇಜವಾಬ್ದಾರಿಯಿಂದ ಉತ್ತರಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.