ADVERTISEMENT

ಹಲ್ಲೆ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2019, 20:30 IST
Last Updated 25 ಏಪ್ರಿಲ್ 2019, 20:30 IST

ತುಮಕೂರು: ಅತ್ತೆ ಹಾಗೂ ಮಾವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿ ಕೃಷ್ಣಮೂರ್ತಿ ಎಂಬ ವ್ಯಕ್ತಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಈಚೆಗೆ ಆದೇಶಿಸಿದೆ.

6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಬಿ.ಎಲ್.ಜಿನರಾಳ್ಕರ್ ಈ ಆದೇಶ ನೀಡಿದ್ದಾರೆ.

ಪ್ರಕರಣ ಹಿನ್ನೆಲೆ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಮಡಕಶಿರಾ ತಾಲ್ಲೂಕು ಅಮರಾಪುರ ಮಂಡಲ್‌ನ ಹನುಮಂತನಹಳ್ಳಿ ಗ್ರಾಮದ ನಿವಾಸಿ ಕೃಷ್ಣಮೂರ್ತಿ. ಈತನ ಮಾವನ ಊರು ಶಿರಾ ತಾಲ್ಲೂಕು ಬೀರನಹಳ್ಳಿ ಗ್ರಾಮ. ಹೆಂಡತಿ ಮತ್ತು ಮಕ್ಕಳನ್ನು ತನ್ನೊಂದಿಗೆ ಕಳುಹಿಸಿಕೊಟ್ಟಿಲ್ಲ ಎಂಬ ಕಾರಣಕ್ಕೆ ಮಾವ ನಿಂಗಣ್ಣ ಮತ್ತು ಅತ್ತೆ ಲಕ್ಷ್ಮಮ್ಮ ಅವರ ಮೇಲೆ 2017ರ ಅಕ್ಟೋಬರ್ 25ರ ರಾತ್ರಿ 1.30ರ ಹೊತ್ತಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ.

ADVERTISEMENT

ಪಟ್ಟಣಾಯಕನಹಳ್ಳಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಎಂ.ಚಂದ್ರಶೇಖರ್ ತನಿಖೆ ಪೂರೈಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕಿ ಆರ್.ಟಿ.ಅರುಣ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.