ADVERTISEMENT

ಮನೆ ಕಳವು ಪ್ರಕರಣ: ಮೂವರ ಬಂಧನ; ₹ 4 ಲಕ್ಷ ಮೌಲ್ಯದ ವಸ್ತು ವಶ

​ಪ್ರಜಾವಾಣಿ ವಾರ್ತೆ
Published 13 ಮೇ 2019, 12:39 IST
Last Updated 13 ಮೇ 2019, 12:39 IST
ವೆಂಕಟೇಶ
ವೆಂಕಟೇಶ   

ಕೊರಟಗೆರೆ: ದ್ವಿಚಕ್ರವಾಹನ ಸೇರಿದಂತೆ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

ತುರುವೇಕೆರೆ ವಿನೋಬನಗರ ನಿವಾಸಿ ವೆಂಕಟೇಶ, ತುಮಕೂರು ಬೆಳಗುಂಬ ರಸ್ತೆ ನಿವಾಸಿ ಗೋಪಾಲ್ ಪ್ರಧಾನ್, ತುಮಕೂರು ಕೋತಿ ತೋಪು ನಿವಾಸಿ ಕೃಷ್ಣ ಬಂಧಿತ ಆರೋಪಿಗಳು.

ಜ. 28ರಂದು ರಾತ್ರಿ ತಾಲ್ಲೂಕಿನ ತೋವಿನಕೆರೆ ಗ್ರಾಮದ ನರಸಿಂಹಮೂರ್ತಿ ಎಂಬುವರ ಮನೆಯಲ್ಲಿ ಸುಮಾರು ₹ 1.62 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಒಡವೆಗಳ ಕಳವು ನಡೆದಿತ್ತು. ಈ ಬಗ್ಗೆ ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿದ್ದ ಸಿಪಿಐ ಎಫ್‌.ಕೆ.ನದಾಫ್‌ ಹಾಗೂ ಪಿಎಸ್‌ಐ ಬಿ.ಸಿ.ಮಂಜುನಾಥ ನೇತೃತ್ವದ ತಂಡ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಒಟ್ಟು 9 ಪ್ರಕರಣಗಳಲ್ಲಿ ಬಂಧಿತರು ಆರೋಪಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಬಂಧಿತರಿಂದ ₹ 1.62 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಒಡವೆ, ಸುಮಾರು ₹ 1.80 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನ, ಒಂದು ಎಲ್‌ಇಡಿ ಟಿವಿ, 3 ಮೊಬೈಲ್‌ ಸೇರಿದಂತೆ ಒಟ್ಟು ₹ 4 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಮಧುಗಿರಿ ಡಿವೈಎಸ್‌ಪಿ ಶ್ರೀನಿವಾಸಮೂರ್ತಿ ಮಾರ್ಗದರ್ಶನದಲ್ಲಿ ಸಿಪಿಐ ನದಾಫ್‌, ಪಿಎಸ್ಐ ಮಂಜುನಾಥ್‌, ಸಿಬ್ಬಂದಿ ರಾಮಚಂದ್ರಯ್ಯ, ಲೋಹಿತ್‌, ಸೋಮನಾಥ, ಶಿವಪ್ರಸಾದ್, ದೊಡ್ಡಲಿಂಗಯ್ಯ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.