ತುಮಕೂರು: ನಗರದ ಬಟವಾಡಿ ಸಮೀಪದ ಮೇಲ್ಸೇತುವೆ ಕಂಬಿಗೆ ಲಾರಿ ಚಾಲಕ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ನಿವಾಸಿ ಎಂ.ಸಿ.ಮಧುಸೂದನ್ (30) ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಧುಸೂದನ್, ಬೆಂಗಳೂರಿನಿಂದ ಲಾರಿಯಲ್ಲಿ ಸಿಮೆಂಟ್ ತುಂಬಿಕೊಂಡು ಬಂದು ಶಿರಾದಲ್ಲಿ ಇಳಿಸಿದ್ದಾರೆ.
ಬೆಂಗಳೂರಿಗೆ ವಾಪಸ್ ಆಗುವಾಗ ಬಟವಾಡಿ ಸಮೀಪ ಲಾರಿ ನಿಲ್ಲಿಸಿ, ಲಾರಿಯಲ್ಲಿದ್ದ ತನ್ನ ಸ್ನೇಹಿತನಿಗೆ ‘ತುಮಕೂರಿನಲ್ಲಿ ಸಂಬಂಧಿಕರಿದ್ದಾರೆ. ನಾನು ಅವರ ಮನೆಗೆ ಹೋಗಿ ಬರುತ್ತೇನೆ. ನೀನು ಲಾರಿ ತೆಗೆದುಕೊಂಡು ಹೋಗು’ ಎಂದು ಹೇಳಿದ್ದಾರೆ. ಯಾವ ಕಾರಣಕ್ಕಾಗಿ ನೇಣು ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.