ADVERTISEMENT

ವಿಚಾರಣೆಗೆ ಕರೆ ತಂದಿದ್ದ ಆರೋಪಿ ಪರಾರಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 16:12 IST
Last Updated 7 ಆಗಸ್ಟ್ 2020, 16:12 IST

ಕೋರ: ವಿಚಾರಣೆಗಾಗಿ ಕರೆ ತಂದಿದ್ದ ಆರೋಪಿಯೊಬ್ಬ ಗುರುವಾರ ರಾತ್ರಿ ಪೊಲೀಸ್ ಠಾಣೆಯಿಂದ ಪರಾರಿ ಆಗಿದ್ದಾನೆ. ಮಧುಗಿರಿ ತಾಲ್ಲೂಕು ಮಿಡಿಗೇಶಿ ಮೂಲದ ರಂಗಪ್ಪ ಎಂಬಾತನನ್ನು ಸರಗಳ್ಳತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿತ್ತು.

ಬೆಂಗಳೂರು, ಕೋರ, ಬೆಳ್ಳಾವಿ, ತಿಲಕ್ ಪಾರ್ಕ್ ಪೊಲಿಸ್ ಠಾಣೆಗಳಲ್ಲಿ ಈತನ ವಿರುದ್ಧ ಸರಗಳ್ಳತನದ ಪ್ರಕರಣಗಳು ಇದ್ದವು. ಕೋರ ಪೊಲೀಸರು ವಿಚಾರಣೆಗೆ ಕರೆತಂದಿದ್ದರು. ಊಟ ಮಾಡಿದ ಖಾಲಿ ಪೊಟ್ಟಣವನ್ನು ಆಚೆ ಎಸೆಯುವ ನೆಪದಲ್ಲಿ ಕುಂಟುತ್ತ ಹೋದ ಆರೋಪಿ ಅಲ್ಲಿಂದ ಓಟ ಕಿತ್ತಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಠಾಣೆಯ ಸಿಸಿ ಟಿವಿ ಕ್ಯಾಮೆರಾದ ದೃಶ್ಯಗಳನ್ನು ತರಿಸಿಕೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.