ADVERTISEMENT

ಸಿಲಿಂಡರ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 2:56 IST
Last Updated 9 ಸೆಪ್ಟೆಂಬರ್ 2020, 2:56 IST
ಸ್ಫೋಟದಿಂದ ಹಾನಿಗೊಂಡ ಮನೆ
ಸ್ಫೋಟದಿಂದ ಹಾನಿಗೊಂಡ ಮನೆ   

ತಿಪಟೂರು: ಮದ್ಯದ ಅಮಲಿನಲ್ಲಿ ಮನೆಯಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್‌ಗೆ ಬೆಂಕಿ ಹಚ್ಚಿಕೊಂಡುಧ್ರುವರಾಜ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊನ್ನವಳ್ಳಿ ಹೋಬಳಿಯ ಆದಿನಾಯಕನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಧ್ರುವರಾಜ್‌ ಸೋಮವಾರ ತಡ ರಾತ್ರಿ ಕುಡಿದ ಮತ್ತಿನಲ್ಲಿ ಮನೆಯಲ್ಲಿದ್ದ ಸಿಲಿಂಡರ್‌ ಪೈಪ್ ತೆಗೆದು ಸಿಲಿಂಡರ್‌ನಿಂದ ಗ್ಯಾಸ್ ಹೊರಬಿಟ್ಟು ಬೆಂಕಿ ಹಚ್ಚಿದ್ದಾನೆ. ತಕ್ಷಣ ಸಿಲಿಂಡರ್‌ ಸ್ಫೋಟಗೊಂಡು ಮೃತಪಟ್ಟಿದ್ದಾರೆ. ಮನೆಯೂ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT