ADVERTISEMENT

ತೋವಿನಕೆರೆಗೆ ಶೀಘ್ರ ‘ಡಿಸಿಸಿ’ ಶಾಖೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 5:30 IST
Last Updated 16 ಸೆಪ್ಟೆಂಬರ್ 2020, 5:30 IST

ತೋವಿನಕೆರೆ: ಗ್ರಾಮದಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ಶಾಖೆಯನ್ನು ಪ್ರಾರಂಭಿಸಲು ಮಾಜಿ ಅಧ್ಯಕ್ಷ ಕೆ.ಎನ್.ರಾಜಣ್ಣ ತಿರ್ಮಾನಿಸಿದ್ದು, ಚುನಾವಣೆಗಳು ಮುಗಿದ ನಂತರ ಪ್ರಾರಂಭಿಸುವ ಭರವಸೆ ನೀಡಿದ್ದಾರೆ ಎಂದು ನಿರ್ದೇಶಕ ಎಸ್.ಹನುಮಾನ್ ತಿಳಿಸಿದರು.

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಕೊರಟಗೆರೆ ತಾಲ್ಲೂಕು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹನುಮಾನ್‌ ಅವರಿಗೆ ಮಂಗಳವಾರ ತೋವಿನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತೋವಿನಕೆರೆ ಗ್ರಾಮದ ಪತ್ತಿನ ಸಹಕಾರ ಸಂಘದ ಮೂಲಕ ಮುಂದಿನ ದಿನಗಳಲ್ಲಿ ಗೊಬ್ಬರ, ರಾಸಾಯನಿಕ ಔಷಧಿ, ಬೀಜಗಳನ್ನು ಮಾರಾಟ ಮಾಡಿಸುವ ಬಗ್ಗೆ ಕ್ರಮ ತೆಗೆದು ಕೊಳ್ಳುವುದಾಗಿ ತಿಳಿಸಿದರು.

ADVERTISEMENT

ಬಿ. ಹನುಮಂತರಾಯಪ್ಪ, ಎಸ್.ಕೆ.ರಂಗನಾಥ ಸಭೆಯಲ್ಲಿ ಮಾತನಾಡಿದರು. ಅಧ್ಯಕ್ಷ ನಾರಾಯಣಪ್ಪ, ಉಪಾಧ್ಯಕ್ಷರಾದ ಕಾಂತಪ್ಪ, ಕುರಂಕೋಟೆ ಸಿದ್ಧರಾಜು, ಜೋನಿಗರಹಳ್ಳಿ ನಾಗಣ್ಣ, ಟಿ.ಬಿ.ಅನಂದಕುಮಾರ್ ಜೈನ್, ಕೆಂಚಪ್ಪ, ಸೀತರಾಮಯ್ಯ ಅಮ್ಮಾಜಕ್ಕ ಹಾಜರಿದ್ಧರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.