ADVERTISEMENT

ಎಸ್‌ಡಿಪಿಐ ನಿಷೇಧಕ್ಕೆ ಅಶ್ವತ್ಥನಾರಾಯಣ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 16:55 IST
Last Updated 12 ಆಗಸ್ಟ್ 2020, 16:55 IST
ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ   

ತುಮಕೂರು: ಎಸ್‌ಡಿಪಿಐ ಸೇರಿದಂತೆ ಶಾಂತಿ ಕದಡುವ ಎಲ್ಲ ಸಂಘಟನೆಗಳನ್ನೂ ನಿಷೇಧಿಸಬೇಕು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಗ್ರಹಿಸಿದರು.

ಇಲ್ಲಿ ಸುದ್ದಿಗಾರರ ಜತೆ ಬುಧವಾರ ಮಾತನಾಡಿ, ‘ಎಸ್‌ಡಿಪಿಐ ಸಂಘಟನೆ ಬೆಳೆಸಿದವರು ಯಾರು, ರಕ್ಷಣೆ ಕೊಟ್ಟಿದ್ದು ಯಾವ ಪಕ್ಷ ಎನ್ನುವ ವಿಚಾರ ಎಲ್ಲರಿಗೂ ಗೊತ್ತಿದೆ. ಈ ಹಿಂದಿನ ಹಲವು ಘಟನೆಗಳಲ್ಲಿ ಎಸ್‌ಡಿಪಿಐ ಪಾತ್ರ ಇದೆ ಎನ್ನುವುದು ಎಲ್ಲರಿಗೂ ತಿಳಿದಿದೆ’ ಎಂದರು.

‘ಶಾಂತಿ, ಸೌಹಾರ್ದ ಕದಡುವ ದಿಕ್ಕಿನಲ್ಲಿ ಯಾವ ಸಂಘಟನೆಗಳು ಯಾವ ದಿಕ್ಕಿನಲ್ಲಿ ಕೆಲಸ ಮಾಡಿವೆ ಎನ್ನುವುದು ಎಲ್ಲರಿಗೂ ಗೊತ್ತು. ಇಂತಹ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

ADVERTISEMENT

ವಿರೋಧ ಪಕ್ಷದ ನಾಯಕರು ಹೇಳಿಕೆ ಕೊಡುವಾಗ ಸಮಾಜದ ಹಿತವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಯಾವುದೇ ಪಕ್ಷ, ಸಂಘಟನೆಯಾಗಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.