ಕೊಡಿಗೇನಹಳ್ಳಿ (ತುಮಕೂರು): ಮೃತಪಟ್ಟಿದ್ದಾರೆ ಎಂದು ಕುಟುಂಬದವರು ನಂಬಿದ್ದ ವ್ಯಕ್ತಿಯೊಬ್ಬರುಮೂರು ತಿಂಗಳ ಬಳಿಕ ಮಂಗಳವಾರ ದಿಢೀರ್ ಪ್ರತ್ಯಕ್ಷರಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದರು!
ಚಿಕ್ಕಮಾಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲತಾ ಅವರ ತಂದೆ ನಾಗರಾಜಪ್ಪ (55) ಅವರನ್ನು ಮಾನಸಿಕ ಅಸ್ವಸ್ಥತೆ ಕಾರಣಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಗರಾಜಪ್ಪ ಮೃತಪಟ್ಟಿದ್ದಾರೆ ಎಂದುಮೂರು ತಿಂಗಳ ಹಿಂದೆ ಆಸ್ಪತ್ರೆಯ ಸಿಬ್ಬಂದಿ ಶವವೊಂದನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಕುಟುಂಬದವರು ಶವಸಂಸ್ಕಾರವನ್ನೂ ನೆರವೇರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.