ADVERTISEMENT

ತಿಪಟೂರು: ಎಪಿಎಂಸಿ ಅಧ್ಯಕ್ಷ ನಿಧನ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 13:08 IST
Last Updated 5 ಆಗಸ್ಟ್ 2020, 13:08 IST
ಪೋಟೋ : 5-ಟಿಪಿಆರ್ 3ರಲ್ಲಿ ಕಳುಹಿಲಾಗಿದೆ.
ಪೋಟೋ : 5-ಟಿಪಿಆರ್ 3ರಲ್ಲಿ ಕಳುಹಿಲಾಗಿದೆ.   

ತಿಪಟೂರು: ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಮಡೆನೂರು ಲಿಂಗರಾಜು (54) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.

ತಾಲ್ಲೂಕಿನ ಮಡೆನೂರು ಗ್ರಾಮದ ಲಿಂಗರಾಜು ಅವರು ಹಲವಾರು ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಹಿಂದೆ ಪ್ರಾಥಮಿಕ ಸಹಕಾರ ಸಂಘದಲ್ಲಿಯೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಮಡೆನೂರಿನ ತೋಟದಲ್ಲಿ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.