ಚಾಕು
(ಸಾಂದರ್ಭಿಕ ಚಿತ್ರ)
ತುಮಕೂರು: ನಗರ ಹೊರವಲಯದ ಅಂತರಸನಹಳ್ಳಿ ಬಳಿ ಭಾನುವಾರ ಗಂಡ, ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.
ಗೀತಾ (20) ಕೊಲೆಯಾದವರು. ನವೀನ್ (25) ಆರೋಪಿ. ಗೀತಾ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗಣನೂರು ಗ್ರಾಮದ ನಿವಾಸಿ. ನವೀನ್ ಕೊರಟಗೆರೆ ತಾಲ್ಲೂಕಿನ ಅಮೃತಗಿರಿಯ ವಾಸಿ. ಇಬ್ಬರಿಗೆ ಸಾಮಾಜಿಕ ಜಾಲ ತಾಣದಲ್ಲಿ ಪರಿಚಯವಾಗಿದ್ದು, 2 ವರ್ಷದ ಹಿಂದೆ ಮದುವೆಯಾಗಿದ್ದರು.
ಒಂದು ವರ್ಷದ ಗಂಡು ಮಗು ಇದೆ. ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಭಾನುವಾರ ಬೆಳಗಿನ ಜಾವ ಮತ್ತೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದಾನೆ. ಬೆಳಿಗ್ಗೆ ಮನೆಯ ಮಾಲೀಕರು ಬಾಡಿಗೆ ಹಣ ಕೇಳಲು ಹೋದಾಗ ಕೊಲೆ ವಿಚಾರ ಗೊತ್ತಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.