ADVERTISEMENT

ತುಮಕೂರು | ವರದಕ್ಷಿಣೆ ಕಿರುಕುಳ ಆರೋಪ; ಗೃಹಿಣಿ ಸಾವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 5:45 IST
Last Updated 6 ಅಕ್ಟೋಬರ್ 2022, 5:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿಯ ಬಿ.ಸಿ.ಕಾವಲ್‌ನ ತೋಟದ ಮನೆಯ ದನದ ಕೊಟ್ಟಿಗೆಯಲ್ಲಿ ಗೃಹಿಣಿ ಶಾಮಲಾ (28) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ಬಿ.ಸಿ.ಕಾವಲ್‌ನ ಮಂಜುನಾಥ್ ಜತೆ ರಾಗದೇವನಹಳ್ಳಿಯ ಶಾಮಲಾ ವಿವಾಹ ನಡೆದಿತ್ತು. ಮದುವೆಯಾಗಿ ಐದು ವರ್ಷಗಳಾಗಿದ್ದು, ದಂಪತಿಗೆ ಗಂಡು ಮಗುವಿದೆ.

ಮದುವೆಯಾದ ನಂತರ ಗಂಡ, ಹೆಂಡತಿ ನಡುವೆ ಜಗಳವಾಗುತ್ತಿದ್ದು ಎರಡು ಬಾರಿ ದಂಡಿನಶಿವರ ಪೊಲೀಸ್ ಠಾಣೆಯ ಮೆಟ್ಟಿಲೇರಿ, ರಾಜಿ ಸಂಧಾನವೂ ಕೂಡ ನಡೆದಿತ್ತು. ಶಾಮಲಾ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ತವರು ಮನೆಯಿಂದ ಗಂಡನ ಮನೆಗೆ ಬಂದಿದ್ದರು.

ADVERTISEMENT

‘ನನ್ನ ಅಕ್ಕನಿಗೆ ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರು ಸಾಯಿಸಿದ್ದಾರೆ’ ಎಂದು ಮೃತಳ ತಮ್ಮ ದರ್ಶನ್ ದಂಡಿನಶಿವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.