ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಅಳವಡಿಸಿದ್ದ ಫ್ಲೆಕ್ಸ್ ಹರಿದಿದ್ದನ್ನು ವಿರೋಧಿಸಿ, ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದ ಘಟನೆ ತಿಪಟೂರು ತಾಲ್ಲೂಕಿನ ಕೆರೆಗೋಡಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಜಯಂತಿಯ ಶುಭಾಶಯಗಳನ್ನು ತಿಳಿಸುವ ಫ್ಲೆಕ್ಸ್ಅನ್ನು ತಡರಾತ್ರಿ ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಇದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ತಿಪಟೂರು ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.