ADVERTISEMENT

ಕೃಷಿ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 5:49 IST
Last Updated 4 ಜುಲೈ 2021, 5:49 IST
ಕುಣಿಗಲ್‌ನಲ್ಲಿ ಕೃಷಿ ಅಭಿಯಾನಕ್ಕೆ ಶಾಸಕ ಡಾ.ರಂಗನಾಥ್ ಚಾಲನೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕಿ ಸೌಮ್ಯಶ್ರೀ ಇದ್ದರು
ಕುಣಿಗಲ್‌ನಲ್ಲಿ ಕೃಷಿ ಅಭಿಯಾನಕ್ಕೆ ಶಾಸಕ ಡಾ.ರಂಗನಾಥ್ ಚಾಲನೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕಿ ಸೌಮ್ಯಶ್ರೀ ಇದ್ದರು   

ಕುಣಿಗಲ್: ಕೃಷಿ ಇಲಾಖೆಯ ಸೌಲಭ್ಯಗಳ ಮಾಹಿತಿ ಎಲ್ಲ ಕೃಷಿಕರಿಗೂ ತಲುಪಿಸಿ, ನಂತರ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಪಡೆದು ಸೌಲಭ್ಯ ವಿತರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಶಾಸಕ ಡಾ.ರಂಗನಾಥ್ ಹೇಳಿದರು.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂದೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೃಷಿಕರಿಗೆ ಸರ್ಕಾರಿ ಸೌಲಭ್ಯಗಳು ಅನೇಕ ಇಲಾಖೆಗಳಿಂದ ನೀಡಲಾಗುತ್ತಿದ್ದು, ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸರ್ಕಾರಿ ಸೌಲಭ್ಯಗಳನ್ನು ವಿತರಿಸ ಬೇಕಾಗಿದೆ. ಸೌಲಭ್ಯಗಳು ಉಳ್ಳವರಿಗೆ ದೊರೆಯುತ್ತಿದೆ. ಅರ್ಹ ಬಡ ಫಲಾನುಭವಿಗಳಿಗೂ ದೊರೆಯುವ ವ್ಯವಸ್ಥೆಯಾಗಬೇಕಿದೆ ಎಂದರು.

ADVERTISEMENT

ಕೃಷಿ ಅಭಿಯಾನದ ಮೂಲಕ ತಾಲ್ಲೂಕಿನ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಂತ್ರಿಕತೆ, ವೈಜ್ಞಾನಿಕ ಪದ್ಧತಿಗಳ ಬಗ್ಗೆಯೂ ಮಾಹಿತಿ ನೀಡಬೇಕಿದೆ. ರಸಗೊಬ್ಬರ ವ್ಯಾಪಾರಿಗಳಿಂದ ಅನ್ಯಾಯವಾಗದಂತೆ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ನೀಡಿದರು.

ಸಹಾಯಕ ಕೃಷಿ ನಿರ್ಧೇಶಕಿ ಸೌಮ್ಯಶ್ರೀ, ತೋಟಗಾರಿಕೆ
ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು ಇದ್ದರು. ಅರ್ಹ ಫಲಾನುಭವಿಗಳಿಗೆ ಸೈಕಲ್ ಗ್ರೀಡ್ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.