ADVERTISEMENT

ತುಮಕೂರು | ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 5:47 IST
Last Updated 10 ಸೆಪ್ಟೆಂಬರ್ 2022, 5:47 IST
   

ತುಮಕೂರು: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಕ್ಯಾಂಟರ್ ಚಾಲಕ ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ಕುಣಿಗಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ–75ರ ಗವಿಮಠ ಸಮೀಪ ನಡೆದಿದೆ.

ನೆಲಮಂಗಲದ ವೆಂಕಟೇಶ (45) ಮೃತರು. ಗಾಯಗೊಂಡಿರುವ ಹನುಮಂತರಾಯಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕ್ಯಾಂಟರ್ ಡಿಕ್ಕಿ ಹೊಡೆದ ನಂತರ ಲಾರಿ ಚಾಲಕ ಲಾರಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT