ADVERTISEMENT

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪಿಸಿ: ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 7:22 IST
Last Updated 16 ಡಿಸೆಂಬರ್ 2020, 7:22 IST
   

ತುಮಕೂರು: ವೀರಶೈವ ಲಿಂಗಾಯತ ಸಮುದಾಯದಷ್ಟೇ ಒಕ್ಕಲಿಗರ ಸಮುದಾಯ ಸಹ ರಾಜ್ಯದಲ್ಲಿ ಪ್ರಮುಖವಾಗಿದೆ. ಈ ಸಮುದಾಯದಲ್ಲೂ ಬಡವರು ಇದ್ದಾರೆ. ಆದ್ದರಿಂದ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅಭಿವೃದ್ಧಿ ನಿಗಮಗಳ ಮೂಲಕ ಬಡವರ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಲಾಗಿದೆ. ಆದರೆ ಅದಕ್ಕೆ ಹಣ ಮೀಸಲಿಟ್ಟಿಲ್ಲ. ಅಧ್ಯಕ್ಷರನ್ನು ನೇಮಿಸಿಲ್ಲ. ಈಗ ತಿಗಳ ಸಮುದಾಯ ಮತ್ತು ಬಲಿಜ ಸಮುದಾಯ ಅಭಿವೃದ್ಧಿ ನಿಯಮಕ್ಕೆ ಆಗ್ರಹಿಸುತ್ತಿವೆ ಎಂದರು.

ADVERTISEMENT

ಶಿರಾ ಉಪಚುನಾವಣೆಗಾಗಿ ಮದಲೂರು ಕೆರೆಗೆ ಮುಖ್ಯಮಂತ್ರಿ ನೀರು ಹರಿಸಿದ್ದಾರೆ. ಜಿಲ್ಲೆಯ ಬೇರೆ ತಾಲ್ಲೂಕುಗಳು ಸಹ ಬರದಿಂದ ನಲುಗಿವೆ. ಅಲ್ಲಿಗೂ ನೀರು ಹರಿಸಬೇಕು ಎಂದು ಹೇಳಿದರು.

ಜೆಡಿಎಸ್ ತುಮಕೂರು ಜಿಲ್ಲೆಯಲ್ಲಿ ಸದೃಢವಾಗಿದೆ. ಆದರೆ ಸಂಪನ್ಮೂಲದ ಕೊರತೆಯಿಂದ ಚುನಾವಣೆಗಳಲ್ಲಿ ಸೋಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.