ADVERTISEMENT

ಗುತ್ತಿಗೆದಾರನ ಮೇಲೆ ಸೊಗಡು ಶಿವಣ್ಣ ಹಲ್ಲೆ

ಸ್ಮಾರ್ಟ್‌ಸಿಟಿ ರಸ್ತೆ ಕಾಮಗಾರಿ ಅಧ್ವಾನ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 19:46 IST
Last Updated 16 ಜನವರಿ 2021, 19:46 IST
ಸೊಗಡು ಶಿವಣ್ಣ
ಸೊಗಡು ಶಿವಣ್ಣ   

ತುಮಕೂರು:ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಕಳಪೆಯಾಗಿವೆ ಎಂದು ಆರೋಪಿಸಿ ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಶನಿವಾರ ಗುತ್ತಿಗೆದಾರರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.

ನಗರದಲ್ಲಿ ಸ್ವಾತಂತ್ರ್ಯಚೌಕ ಹಾಗೂ ಮಂಡಿಪೇಟೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಅಧ್ವಾನದಿಂದ ಕೂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸ್ವಾತಂತ್ರ್ಯ ಚೌಕದಿಂದ ಮಂಡಿಪೇಟೆಗೆ ತೆರಳುವಾಗ ರಸ್ತೆ ಅಧ್ವಾನವಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಯ ಗುತ್ತಿಗೆಯನ್ನು ಆಂಧ್ರದವರಿಗೆ ನೀಡಿದ್ದಾರಂತೆ. ಅಧ್ವಾನದ ಬಗ್ಗೆ ಅಲ್ಲಿದ್ದ ಗುತ್ತಿಗೆದಾರನನ್ನು ಪ್ರಶ್ನಿಸಿದಾಗ ಅಸಂಬದ್ಧವಾಗಿ ಉತ್ತರಿಸಿದ. ಆಗ ಸಿಟ್ಟಿನಿಂದ ಏಟು‌‌ ಕೊಟ್ಟೆ’ ಎಂದು ಸೊಗಡು ಶಿವಣ್ಣ ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.