ADVERTISEMENT

ಕಿತ್ತಾಡುತ್ತಿದ್ದ ಜಾನುವಾರು ಬಿಡಿಸಲು ಹೋಗಿ ರೈತ ಸಾವು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 6:51 IST
Last Updated 18 ಡಿಸೆಂಬರ್ 2025, 6:51 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಪ್ರಜಾವಾಣಿ ವಾರ್ತೆ

ADVERTISEMENT

ಮಧುಗಿರಿ: ತಾಲ್ಲೂಕು ಆಚೇನಹಳ್ಳಿ ಗ್ರಾಮದಲ್ಲಿ ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ಮರ್ಮಾಂಗಕ್ಕೆ ಏಟು ಬಿದ್ದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರಾಮದ ವೆಂಕಟಪ್ಪ ಪುತ್ರ ನಾಗರಾಜು (35) ಮೃತಪಟ್ಟರು. ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದಾಗ, ಎರಡು ಜಾನುವಾರುಗಳ ನಡುವೆ ಕಾದಾಟ ಶುರುವಾಗಿದೆ. ಇದನ್ನು ಬಿಡಿಸಲು ಹೋಗಿ ಜಾನುವಾರು ಮರ್ಮಾಂಗಕ್ಕೆ ತಿವಿದು ಈ ದುರ್ಘಟನೆ ನಡೆದಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.