ADVERTISEMENT

ಸಂಚಾರಿ ವಿಜಯ್‌ಗೆ ಅಂತಿಮ ನಮನ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 5:26 IST
Last Updated 16 ಜೂನ್ 2021, 5:26 IST
ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗೇಟ್‌ನಲ್ಲಿ ಸಂಚಾರಿ ವಿಜಯ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಮುಗಿಬಿದ್ದ ಅಭಿಮಾನಿಗಳು
ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗೇಟ್‌ನಲ್ಲಿ ಸಂಚಾರಿ ವಿಜಯ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಮುಗಿಬಿದ್ದ ಅಭಿಮಾನಿಗಳು   

ಹುಳಿಯಾರು: ರಸ್ತೆ ಅಪಘಾತದಿಂದಾಗಿ ನಿಧನರಾದ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರ ಪಂಚನಹಳ್ಳಿಗೆ ತೆರಳುವ ಮಾರ್ಗಮಧ್ಯೆ ಪಟ್ಟಣದಲ್ಲಿ ನೂರಾರು ಜನರು ಅಂತಿಮ ನಮನ ಸಲ್ಲಿಸಿದರು.

ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರ ಬರುವ ಮುನ್ಸೂಚನೆಯಿಂದ 12 ಗಂಟೆಯಿಂದಲೇ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ಹುಳಿಯಾರು ಪೊಲೀಸ್ ಠಾಣೆ ವೃತ್ತದಲ್ಲಿ ಕಾದು ನಿಂತಿದ್ದರು. ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರಿಂದ ಎಲ್ಲಿರಿಗೂ ಅವಕಾಶ ಕಲ್ಪಿಸುವುದು ಕಷ್ಟವಾಯಿತು.

ನೀನಾಸಂ ಸತೀಶ್‌ ಮಾತನಾಡಿ, ನಿಗದಿತ ಸಮಯಕ್ಕೆ ಅಂತಿಮ ಸಂಸ್ಕಾರ ಮುಗಿಸಬೇಕಾಗಿರುವುದರಿಂದ ಕೇವಲ 5 ನಿಮಿಷ ಅವಕಾಶ ನೀಡುತ್ತೇವೆ. ಒಬ್ಬರು ಮಾತ್ರ ದರ್ಶನ ಪಡೆದು ಎಲ್ಲರೂ ನಿಂತಲ್ಲಿಯೇ ಅಂತಿಮ ನಮನ ಸಲ್ಲಿಸುವಂತೆ ಮನವಿ ಮಾಡಿದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಕೂಡ ಪಾರ್ಥಿವ ಶರೀರದೊಟ್ಟಿಗೆ ಹುಳಿಯಾರಿಗೆ ಬಂದಿದ್ದರು.

ಹೋಬಳಿಯ ಹೊಯ್ಸಳಕಟ್ಟೆ ಗೇಟ್‌ನಲ್ಲಿಯೂ ಸಂಚಾರಿ ವಿಜಯ್‌ ಅವರ ಪಾರ್ಥಿವ ಶರೀರಕ್ಕೆ ಅಂತಿನ ನಮನ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.