ತುಮಕೂರು: ನಗರದಲ್ಲಿ ಈಚೆಗೆ ನಡೆದ ವಿಶ್ವ ಹಿಂದೂ ಪರಿಷತ್ ಶೌರ್ಯ ಯಾತ್ರೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಪರಿಷತ್ತಿನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪಂಪ್ವೆಲ್ ಧಾರ್ಮಿಕ ಭಾವನೆ ಗಳಿಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳ ಬೇಕು ಎಂದು ಮುಸ್ಲಿಂ ಸಂಘಟನೆಗಳ ಪದಾಧಿಕಾರಿಗಳು ನಗರದ ತಿಲಕ್ ಪಾರ್ಕ್ ಠಾಣೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.
ಘಟನೆ ಹಿನ್ನೆಲೆ: ‘ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ, ಮುಂದೊಂದು ದಿನ ತುಮಕೂರು ಸೇರಿದಂತೆ ಇಡೀ ರಾಜ್ಯ ಹಿಂದುತ್ವದ ಫ್ಯಾಕ್ಟರಿ ಆಗಲಿದೆ. ಗುಜರಾತ್ನಲ್ಲಿ 59 ಜನ ಕರಸೇವಕರ ಹತ್ಯೆಗೆ ಪ್ರತೀಕಾರವಾಗಿ ಸುಮಾರು ಎರಡು ಸಾವಿರ ಜನರ ಹತ್ಯೆಯಾಗಿದೆ. ಇದು ಹಿಂದೂಗಳ ಪರಾಕ್ರಮ, ಸಾಮರ್ಥ್ಯ’ ಎಂದು ಹೇಳಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.