ADVERTISEMENT

ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 6:36 IST
Last Updated 10 ಜೂನ್ 2021, 6:36 IST
ಸಚಿವ ಜೆ.ಸಿ.ಮಾಧುಸ್ವಾಮಿ ಆಹಾರ ಪದಾರ್ಥಗಳ ಕಿಟ್‍ ವಿತರಿಸಿದರು
ಸಚಿವ ಜೆ.ಸಿ.ಮಾಧುಸ್ವಾಮಿ ಆಹಾರ ಪದಾರ್ಥಗಳ ಕಿಟ್‍ ವಿತರಿಸಿದರು   

ತುಮಕೂರು: ಕೋವಿಡ್ ಲಾಕ್‍ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿರುವ ಹೊರ ರಾಜ್ಯದ 250 ಮಂದಿ ಕೂಲಿ ಕಾರ್ಮಿಕರಿಗೆ ಸ್ವಾಮಿ ವಿವೇಕಾನಂದ ಸ್ಪೋರ್ಟ್ಸ್ ಅಂಡ್
ಕಲ್ಚರಲ್ ಅಸೋಸಿಯೇಷನ್ ವತಿಯಿಂದ ನೀಡಲಾದ ಆಹಾರ ಪದಾರ್ಥದ ಕಿಟ್‍ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ವಿತರಿಸಿದರು.

ಹೊರ ರಾಜ್ಯದ ಕೂಲಿ ಕಾರ್ಮಿಕರನ್ನು ಗುರುತಿಸಿ ಆಹಾರ ಧಾನ್ಯದ ಕಿಟ್ ವಿತರಿಸುತ್ತಿರುವ ಸಂಸ್ಥೆಯ ಯುವಕರ ಕಾರ್ಯ ಶ್ಲಾಘನೀಯ ಎಂದು ಸಚಿವರು ಹೇಳಿದರು.

ವಿವೇಕಾನಂದ ಸ್ಪೋರ್ಟ್ ಅಂಡ್ ಕಲ್ಚರಲ್ ಅಸೋಸಿಯೇಷನ್‍ನ ಅನಿಲ್, ‘ಮೇ 8ರಿಂದ ನಮ್ಮ ಸಂಸ್ಥೆ ತಂಡ ಸ್ವಯಂ ಪ್ರೇರಿತರಾಗಿ ಮಹಾನಗರ ಪಾಲಿಕೆ ಜತೆ ಸೇರಿಕೊಂಡು ಕೆಲಸ ಮಾಡುತ್ತಿದೆ’ ಎಂದರು.

ADVERTISEMENT

ನಗರದ 21, 22 ಮತ್ತು 23ನೇ ವಾರ್ಡ್‍ಗಳಲ್ಲಿ ನಮ್ಮ ತಂಡ ಮನೆ ಮನೆಗೆ ಹೋಗಿ ಕೋವಿಡ್ ದೃಢಪಟ್ಟು ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರಿಗೆ ಅಗತ್ಯ ಇರುವ ಕಿಟ್ ವಿತರಿಸುತ್ತಿದೆ. ಜತೆಗೆ ಆಕ್ಸಿ ಮೀಟರ್‌ನಲ್ಲಿ ಸೋಂಕಿತರ ಪಲ್ಸ್ ಪರೀಕ್ಷೆಮಾಡಿ, ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಸಂಘದ ಗೌರವಾಧ್ಯಕ್ಷ ಎನ್.ಎಸ್.ಜಯಕುಮಾರ್, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಶ್ರೀನಿವಾಸ್, ನಿಖಿಲ್‍ಗೌಡ, ನಂದೀಶ್, ಕಿರಣ್, ಪ್ರವೀಣ್, ಕಾರ್ತೀಕ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.