ADVERTISEMENT

ಹೋಟೆಲ್‌ಗೆ ನುಗ್ಗಿ ಗಲಾಟೆ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2019, 13:41 IST
Last Updated 2 ಸೆಪ್ಟೆಂಬರ್ 2019, 13:41 IST
   

ತುಮಕೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಆನಂದ್ ಬಿಹಾರಿ ಹೋಟೆಲ್‌ಗೆ ಶನಿವಾರ ನಡುರಾತ್ರಿ ನುಗ್ಗಿ ದಾಂಧಲೆ ಮಾಡಿದ 4 ಮಂದಿಯನ್ನು ಕ್ಯಾತ್ಸಂದ್ರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಕುಮಾರ್, ರಂಗಸ್ವಾಮಿ, ರಾಜೇಶ್, ದಕ್ಷತ್‌ಗೌಡ ಬಂಧಿತರು. ಆರೋಪಿಗಳೆಲ್ಲರೂ ಕ್ಯಾತ್ಸಂದ್ರ ಸುತ್ತಮುತ್ತಲಿನ ಗ್ರಾಮದವರಾಗಿದ್ದಾರೆ ಎಂದು ಸಿಪಿಐ ಶ್ರೀಧರ್ ತಿಳಿಸಿದರು.

‘ಆರೋಪಿಗಳಲ್ಲಿ ಇನ್ನೂ ಕೆಲವರು ತಲೆ ಮರೆಸಿಕೊಂಡಿದ್ದಾರೆ. ಏಕಾಏಕಿ ಹೋಟೆಲ್‌ಗೆ ನುಗ್ಗಿದ ಆರೋಪಿಗಳು ಕ್ಷುಲಕ್ಕ ಕಾರಣಕ್ಕೆ ಮಾಲೀಕರ ಜತೆ ವಾಗ್ವಾದ ನಡೆಸಿದರು. ನಂತರ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇವರು ಕರವೇ ಕಾರ್ಯಕರ್ತರು ಎಂಬ ಮಾಹಿತಿ ಇದೆ’ ಎಂದು ತುಮಕೂರು ನಗರ ಡಿವೈಎಸ್ಪಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.