ADVERTISEMENT

ಹೆಬ್ಬೂರು | ಠಾಣೆಯಲ್ಲಿ ಹೊಡೆದಾಟ: ನಾಲ್ವರು ಸಿಬ್ಬಂದಿ ಅಮಾನತು

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 7:42 IST
Last Updated 12 ಜೂನ್ 2020, 7:42 IST
   

ತುಮಕೂರು: ಹೆಬ್ಬೂರು ಠಾಣೆಯಲ್ಲಿ ಮದ್ಯ ಸೇವಿಸಿ ಜೂಜಾಟದಲ್ಲಿ ತೊಡಗಿದ್ದ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ರಾಮಚಂದ್ರಪ್ಪ, ಠಾಣೆ ರೈಟರ್ ದೇವರಾಜ್, ಚಾಲಕ ಸಂತೋಷ್, ಕಾನ್‌ಸ್ಟೆಬಲ್ ಮಹೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅಮಾನತುಗೊಳಿಸಿದ್ದಾರೆ.

ಮಂಗಳವಾರ ರಾತ್ರಿ ಈ ನಾಲ್ಕು ಮಂದಿ ಜೂಜಾಟದಲ್ಲಿ ತೊಡಗಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಕೈ ಮಿಲಾಯಿಸಿದ್ದರು. ವಿಷಯ ತಿಳಿದ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಠಾಣೆಗೆ ಭೇಟಿ ನೀಡಿ ಸಿಬ್ಬಂದಿಗೆ ಬುದ್ದಿ ಹೇಳಿದ್ದರು.

ಹೊಡೆದಾಟದ ಪ್ರಕರಣ ಬಯಲಾಗುತ್ತಿದ್ದಂತೆ ಎಸ್‌ಪಿ ನಾಲ್ಕು ಮಂದಿಯನ್ನು ಅಮಾನತುಗೊಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.