ADVERTISEMENT

ತುಮಕೂರು: ಪ್ರಾಧ್ಯಾಪಕನಿಗೆ ₹10 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 3:10 IST
Last Updated 6 ಸೆಪ್ಟೆಂಬರ್ 2024, 3:10 IST
ಸೈಬರ್‌ ಕ್ರೈಂ
ಸೈಬರ್‌ ಕ್ರೈಂ   

ತುಮಕೂರು: ‘ಟ್ರೇಡಿಂಗ್‌ ಮೇಲೆ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಪಡೆಯಬಹುದು’ ಎಂಬ ಆಮಿಷಕ್ಕೆ ಒಳಗಾಗಿ ನಗರದ ಎಸ್‌.ಎಸ್‌.ಪುರಂನ ನಿವಾಸಿ, ಪ್ರಾಧ್ಯಾಪಕ ಟಿ.ಆರ್‌.ಹೇಮಂತ್‌ಕುಮಾರ್‌ ಎಂಬುವರು ₹10.53 ಲಕ್ಷ ಕಳೆದುಕೊಂಡಿದ್ದಾರೆ.

ಸೈಬರ್‌ ವಂಚಕರು ಕಳುಹಿಸಿದ ಲಿಂಕ್‌ ಮುಖಾಂತರ ‘ಡಿ–ಮಾಟ್‌ ಟ್ರೇಡಿಂಗ್‌ ಆ್ಯಪ್‌’ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ವಾಟ್ಸ್‌ ಆ್ಯಪ್‌ನಲ್ಲಿ ಹಣ ಹೂಡಿಕೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸೈಬರ್‌ ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್‌ ಖಾತೆ ಮತ್ತು ಯುಪಿಐ ಐ.ಡಿಗಳಿಗೆ ಆ. 5ರಿಂದ 27ರ ವರೆಗೆ ಹಂತ ಹಂತವಾಗಿ ₹10.53 ವರ್ಗಾಯಿಸಿದ್ದಾರೆ.

ಹೇಮಂತ್‌ ಅವರಿಗೆ ಯಾವುದೇ ಹಣ ವಾಪಸ್‌ ಬಂದಿಲ್ಲ. ಮೋಸ ಹೋಗಿರುವುದು ಅರಿವಿಗೆ ಬಂದ ನಂತರ ಸೈಬರ್‌ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.